ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕ ಬಹುಮಾನ ನೀಡಿಕೆಗೆ ಸಂಬಂಧಿಸಿದಂತೆ 2019ನೇ ಸಾಲಿನಲ್ಲಿ ಅಂದರೆ ದಿನಾಂಕ:01.01.2020 ರಿಂದ 31.12.2020ರವರೆಗಿನ ಅವಧಿಯಲ್ಲಿ ಪ್ರಥಾಮಾವೃತ್ತಿಯಲ್ಲಿ ಪ್ರಕಟವಾಗಿರುವ ಅನುವಾದಿತ ಪುಸ್ತಕಗಳನ್ನು ಹಾಗೂ ಅನುವಾದ ಅಧ್ಯಯನವನ್ನು ಕುರಿತ ಪುಸ್ತಕಗಳನ್ನು 2020ನೇ ಸಾಲಿನ ಪುಸ್ತಕ ಬಹುಮಾನ ನೀಡಿಕೆಗಾಗಿ ಅರ್ಹ ಅನುವಾದಕರು/ಪ್ರಕಾಶಕರಿಂದ ಆಹ್ವಾನಿಸಲಾಗಿದೆ.
ಕನ್ನಡದಿಂದ ಇತರ ಯಾವುದೇ ಭಾಷೆಗಾಗಲೀ ಇಲ್ಲವೇ ಇತರ ಯಾವುದೇ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಪ್ರಥಮಾವೃತ್ತಿಯಲ್ಲಿ ಪ್ರಕಟಗೊಂಡಿರುವ ಕೃತಿಗಳನ್ನು ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. 2020ರ ಸಾಲಿನಲ್ಲಿ ಅನುವಾದ ಸಾಹಿತ್ಯವನ್ನು ಕುರಿತ ‘ಅಧ್ಯಯನ ಪುಸ್ತಕ’ಗಳನ್ನು ಕೂಡ ಬಹುಮಾನಕ್ಕಾಗಿ ಪರಿಗಣಿಸಲಾಗುತ್ತದೆ. ಪ್ರಥಮಾವೃತ್ತಿಯಲ್ಲಿ 2020ನೇ ಸಾಲಿನಲ್ಲಿ ಪ್ರಕಟವಾಗಿರುವ ಅನುವಾದಿತ ಪುಸ್ತಕಗಳ ಬಗ್ಗೆ ಮಾಹಿತಿ ಇರುವವರು ಸಹ ಪುಸ್ತಕಗಳನ್ನು ಕಚೇರಿಗೆ ಕಳುಹಿಸಿಕೊಡಬಹುದಾಗಿದೆ. ಬಹುಮಾನಿತ ಕೃತಿಗಳಿಗೆ ಪ್ರಾಧಿಕಾರವು ನಿಗದಿಪಡಿಸಿದ ಮೊತ್ತವನ್ನು ಬಹುಮಾನವಾಗಿ ನೀಡಲಾಗುತ್ತದೆ.
ಪುಸ್ತಕ ಬಹುಮಾನಕ್ಕೆ ಪುಸ್ತಕಗಳನ್ನು ಕಳುಹಿಸುವವರು ಅನುವಾದಿತ ಪ್ರಕಟಣೆಗಳ ಪ್ರತಿ ಪುಸ್ತಕದ ನಾಲ್ಕು ಪ್ರತಿಗಳನ್ನು ಉಚಿತವಾಗಿ
ರಿಜಿಸ್ಟ್ರಾರ್,
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
ಜ್ಞಾನಭಾರತಿ, ಕಲಾಗ್ರಾಮ,
ಮಲ್ಲತ್ತಹಳ್ಳಿ, ಬೆಂಗಳೂರು-560056
ದೂ:23183311/12 ಕಚೇರಿಗೆ ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ದಿನಾಂಕ:10.03.2021ರೊಳಗಾಗಿ ತಲುಪಿಸಬೇಕೆಂದು ಈ ಮೂಲಕ ಕೋರಲಾಗಿದೆ.
ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ,
ಮಲ್ಲತ್ತಹಳ್ಳಿ, ಬೆಂಗಳೂರು - 560056
ದೂರವಾಣಿ: 080 - 23183311, 23183312
ವಿದ್ಯನ್ಮಾನ ಅಂಚೆ: kbbp-bengaluru@ka.gov.in